Skip to main content

Bhoomi hunnime information in Kannada or seegehunnime-/ಭೂಮಿ ಹುಣ್ಣಿಮೆ ,ಬೂಮಣಿ ಹಬ್ಬ/Bhoomi hunnime bagge mahithi

ಭೂಮಿ ಹುಣ್ಣಿಮೆ ,ಬೂಮಣಿ ಹಬ್ಬ



 ಭೂಮಣಿ ಹಬ್ಬ ಎಂದು ಕರೆಯುವ ಭೂಮಿ, ಬೆಳೆಯ ಪೂಜೆಯ ಹಬ್ಬವನ್ನು ಮಲೆನಾಡಿನಲ್ಲಿ ಭೂಮಿ ಹುಣ್ಣಿಮೆ, ಬಯಲುನಾಡಿನಲ್ಲಿ ಸೀಗೆ ಹುಣ್ಣಿಮೆ ಎಂದು ಕರೆಯುತ್ತಾರೆ. ಎತ್ತು ಓಡಿಸುವ, ಬೆಂಕಿಯ ಮೇಲೆ ಹೋರಿ ನಡೆಸುವ ಬಯಲುಸೀಮೆಯ ಸೀಗೆ ಹುಣ್ಣಿಮೆ, ಭೂಮಿ ತಾಯಿಗೆ ಬಯಕೆ ನೀಡುವ ಭೂಮಿ ತಾಯಿಯ ಬಯಕೆಯ ಸೀಮಂತವನ್ನು ನಡೆಸುವ ಮಲೆನಾಡಿನ ಬೂಮಣಿ ಹಬ್ಬ ಆಚರಣೆಯಲ್ಲಿ ತುಸು ಭಿನ್ನ.



ಮಲೆನಾಡೆಂದರೆ…. ಕಾಡು, ಪರಿಸರ, ಸಸ್ಯ, ಮಳೆ, ಬೆಳೆ ಇವುಗಳೆಲ್ಲದರ ಒಟ್ಟಂದದದ ಬದುಕೇ ಬುಡಕಟ್ಟು ಬದುಕು. ಮಲೆನಾಡಿನ ಮೂಲನಿವಾಸಿಗಳು, ಕೆಳವರ್ಗಗಳು ಪ್ರಕೃತಿ ಆರಾಧನೆಯ ಈ ಭೂಮಿ ಹುಣ್ಣಿಮೆಯನ್ನು ವಿಶಿಷ್ಟವಾಗಿ ಆಚರಿಸುತ್ತಾರೆ. ಒಂದೆರಡು ವಾರಗಳ ಮೊದಲು ಬೂಮಣಿ ಬುಟ್ಟಿ ಅಲಂಕಾರ ಪ್ರಾರಂಭಿಸುವ ಮಹಿಳೆಯರು ಸಾಂಪ್ರದಾಯಿಕ ಚಿತ್ತಾರವನ್ನು ರಚಿಸುತ್ತಾರೆ. ನಂತರ ಮನೆಯ ಯಜಮಾನ ಹಬ್ಬದ ಅಗತ್ಯ ವಸ್ತುಗಳನ್ನು ಸಂಗ್ರಹಿಸುತ್ತಾನೆ. ಇಂಥ ಸಂಗ್ರಹಿಸಿದ ವಸ್ತುಗಳನ್ನು ಚರಗ ಅಥವಾ ಹಂಚೆಬ್ಲಿ ಹಾಗೂ ಎಡೆಯ ಪದಾರ್ಥಗಳಾಗಿ ವಿಂಗಡಿಸಲಾಗುತ್ತದೆ.

ಸೊಪ್ಪು-ಕಾಯಿಗಳ ಹಸಿರು ಚರಗವನ್ನು ರೈತ ಮುಂಜಾನೆ ಜಮೀನು-ಬೆಳೆಗಳಿಗೆ ಬೀರಿ ಸಸ್ಯ, ಪ್ರಾಣಿ, ಪಕ್ಷಿಗಳಿಗೆ ನೀಡುತ್ತಾನೆ. ನಂತರ ಭೂಮಿಯೆಂದರೆ ನೆಲ, ನೆಲದ ಬೆಳೆಗಳಿಗೆ ಪೂಜೆ ಮಾಡಿ ಅಲ್ಲಿ ಕಡಬು-ಕಜ್ಜಾಯಗಳ ಥರಾವರಿ ಆಹಾರವನ್ನಿಟ್ಟು ನೈವೇದ್ಯ ಮಾಡಿ, ಎಡೆಹಾಕಿ, ತಾನೇ ತಿಂದು ಒಂದು ಎಡೆಯನ್ನು ಭೂಮಿಯಲ್ಲಿ ಹೂತು ಬೆಳೆ-ಭೂಮಿಯ ಬಯಕೆ ತೀರಿಸುತ್ತಾನೆ.

ಮುಂಜಾನೆ ಚರ ಬೀರುವಾಗ ಹಾಡು, ಘೋಷಣೆಯೊಂದಿಗೆ ಚರ ಬೀರುವ ರೈತ ನಂತರ ಭೂಮಿ-ಬೆಳೆಪೂ ಜೆಯ ನಂತರ ಎಡೆಯನ್ನು ನೀರು, ಕಾಗೆ ಗಳಿಗೆ ನೀಡುತ್ತಾನೆ. ಹೀಗೆ ಒಂದೆರಡು ವಾರಗಳ ಪೂರ್ವತಯಾರಿಯ ಹಬ್ಬಕ್ಕಾಗಿ ಬಿಡುವುಮಾಡಿಕೊಳ್ಳುವ ರೈತ ತಾನು ತಿಂದು, ಸಸ್ಯ, ಪ್ರಾಣಿ, ಪಕ್ಷಿಗಳಿಗೆ ತಿನ್ನಿಸಿ ಸಂಬ್ರಮಿಸುತ್ತಾನೆ. ಪ್ರದೇಶ, ಜನಾಂಗೀಯವಾರು ತುಸು ಭಿನ್ನತೆಯಿಂದ ಆಚರಿಸುವ ಈ ಹಬ್ಬ ಪ್ರಕೃತಿ, ಬೆಳೆ, ಮಳೆ,ಜಲ ಫಸಲು ಭರಿತ ಬೆಳೆಯ ಬಯಕೆ ತೀರಿಸುವ ಸೀಮಂತದ ಹಬ್ಬ. 

                                          

ಇವತ್ತು ಬೆಳಗ್ಗೆ ಭೂಮಿ ಹುಣ್ಣಿಮೆ ಎಂದು ಶಿಷ್ಟಭಾಷೆಯಲ್ಲಿ ಕರೆಯುವ, ಭೂಮಣ್ಣಿ ಹಬ್ಬ ಎಂದು ನಮ್ಮ ಮಾತಲ್ಲಿ ಹೇಳುವ ಅನ್ನ ಕೊಡುವ ಭೂಮಿಯನ್ನು ಪೂಜಿಸುವ ಹಬ್ಬ ಮುಗಿಸಿ ಕೂತಿರುವೆ.

ಸಂಜೆ ಇಳಿಬಿಸಿಲಿನ ಹೊತ್ತಲ್ಲಿ ಅವ್ವನ ಜೊತೆ ಲೋಕಾಭಿರಾಮ ಮಾತನಾಡುತ್ತಾ ಕುಳಿತವನಿಗೆ ನಿನ್ನೆ ರಾತ್ರಿ ಬೆಳಗಿನ ಜಾವದವರೆಗೆ ಹಬ್ಬದ ಅಡುಗೆ ಮಾಡಿದ ಅವ್ವ, ಬೇಗ ಊಟ ಮಾಡಿ ಮಲಗಾನ.. ಎಂದಾಗ ಭೂಮಣ್ಣಿ ಹಬ್ಬ ಎಂಬ ಮಣ್ಣಿನಮಕ್ಕಳ ಸಂಭ್ರಮದ ಮಜಲುಗಳು ಕಣ್ಣಮುಂದೆ ಬಂದುಹೋದವು.

ಹಾಗೆ ನೋಡಿದರೆ ನಿನ್ನೆಯಿಂದಲೇ ಈ ಹಬ್ಬದ ಕುರಿತು ಮಲೆನಾಡು ಮತ್ತು ಬಯಲುಸೀಮೆ ಕಡೆಯ ಗೆಳೆಯರು ಇಲ್ಲಿ ಸಾಕಷ್ಟು ಬರೆದಿದ್ದಾರೆ. ತಮ್ಮ ತಮ್ಮ ಕಡೆಯ ಹಬ್ಬದ ವೈಶಿಷ್ಟ್ಯಗಳ ಬಗ್ಗೆ ಸಂಭ್ರಮದಿಂದಲೇ ಎಲ್ಲ ಹಂಚಿಕೊಂಡಿದ್ದಾರೆ. ನಮ್ಮ ಸಾಗರ, ಸೊರಬ, ಹೊಸನಗರ, ತೀರ್ಥಹಳ್ಳಿ ಕಡೆಯಂತೂ ಬಹುತೇಕರ ವಾಟ್ಸಪ್ ಸ್ಟೇಟಸ್ ಮತ್ತು ಗುಂಪುಗಳಲ್ಲಿ ಭೂಮಣ್ಣಿ ಹಬ್ಬದ ಫೋಟೊ, ವಿಡಿಯೋ, ಶುಭಾಶಯ ಕಾರ್ಡುಗಳ ಹೊಳೆ ಹರಿದಿದೆ.

ಹಾಗಾಗಿ ಈ ನೆಲಮೂಲದ ಆಚರಣೆಯ ಕುರಿತ ಸಾಮಾನ್ಯ ಸಂಗತಿಗಳ ಬದಲು, ನಮ್ಮಲ್ಲಿ ನಾವು ಸಾಂಪ್ರದಾಯಿಕವಾಗಿ ರೂಢಿಯಲ್ಲಿರುವ ಕೆಲವು ನಿರ್ದಿಷ್ಟ ಆಚರಣೆಗಳ ಬಗ್ಗೆ ಹೇಳುವೆ;




ನಮ್ಮ ಮನೆಗಳಲ್ಲಿ ಈ ಹಬ್ಬದ ಅಚರಣೆ ಶುರುವಾಗುವುದು ಮಹಾನವಮಿ ದಿನದಿಂದಲೇ. ಮಹಾನವಮಿಗೆ ಮೂರ್ನಾಲ್ಕು ದಿನ ಇರುವಾಗಲೇ ಭೂಮಣ್ಣಿ ಬುಟ್ಟಿ ಎನ್ನುವ ಒಂದು ದೊಡ್ಡದು ಮತ್ತು ಒಂದು ಚಿಕ್ಕದು ಸೇರಿ ಎರಡು ಬುಟ್ಟಿಗಳಿಗೆ ಮೆಂತೆ ಹಿಟ್ಟು, ನ್ಯೂಸ್ ಪೇಪರ್ ಕಲಸಿಟ್ಟು ತುಸು ಕೊಳೆಸಿದ ಪೇಸ್ಟ್ ಮಾಡಿ ಬಳಿದು, ನಂತರ ಕೆಮ್ಮಣ್ಣು ಬಳಿದು ಒಣಗಿಸಿ ಚಿತ್ರ ಬರೆಯಲು ಸಜ್ಜುಗೊಳಿಸಿಡುತ್ತಾರೆ.

ಮಹಾನವಮಿಯ ದಿನ ಪೂಜೆ ಮಾಡಿದ ಬಳಿಕ ಆ ಜೋಡಿ ಬುಟ್ಟಿಗಳ ಮೇಲೆ ಹಸೆ ಚಿತ್ತಾರ ಮೂಡಿಸುತ್ತಾರೆ. ಸಾಮಾನ್ಯವಾಗಿ ನಮ್ಮಲ್ಲಿ ಎರಡು ಬಗೆಯ ಭೂಮಣ್ಣಿ ಬುಟ್ಟಿ ಬಳಕೆಯಲ್ಲಿದ್ದು, ಅವರವರ ಮನೆತನದ ಸಂಪ್ರದಾಯದಂತೆ ಕೆಮ್ಮಣ್ಣು ಬಳಿದ ಬುಟ್ಟಿಯ ಮೇಲೆ ಅಕ್ಕಿಹಿಟ್ಟಿನ ಬಿಳಿ ಬಣ್ಣದ ಚಿತ್ತಾರ ಬರೆಯುತ್ತಾರೆ. ಮತ್ತೆ ಕೆಲವರು ಕೆಮ್ಮಣ್ಣಿನ ಬುಟ್ಟಿ ಕ್ಯಾನವಾಸ್ ಮೇಲೆ ಗುಡ್ಡೆಗೇರು ಕಾಯಿ ರಸವನ್ನು ಬಳಸಿ ಕಪ್ಪು ಬಣ್ಣದಲ್ಲಿ ಚಿತ್ತಾರ ಮೂಡಿಸುತ್ತಾರೆ.

ಮಹಾನವಮಿಯಿಂದ ಭೂಮಿ ಹುಣ್ಣಿಮೆ ನಡುವಿನ ಐದು ದಿನದಲ್ಲಿ ಬುಟ್ಟಿ ಚಿತ್ತಾರ ಮುಗಿದು, ಹಬ್ಬದ ಹಿಂದಿನ ದಿನ ಬುಟ್ಟಿ ಸಿದ್ಧವಾಗಬೇಕು.

ಹಬ್ಬದ ಅಡುಗೆಗಳದ್ದೇ ಒಂದು ಬಹಳ ಕುತೂಹಕರ ಲೋಕ. ಕಾಡು ಗೆಣಸಿನಿಂದ ಹಿಡಿದು ಊರ ಅಮಟೆಕಾಯಿವರೆಗೆ ಭೂಮಣ್ಣಿ ಹಬ್ಬಕ್ಕೆ ಮಾಡಲೇಬೇಕಾದ ಅಡುಗೆಗಳ ಪಟ್ಟಿ ದೊಡ್ಡದಿದೆ.

ಒಂಥರಾ ಆಧುನಿಕ ಮಂಚೂರಿಯನ್ ಹೋಲುವ ಅಮಟೆಕಾಯಿ ಪಲ್ಯದ ರುಚಿಯೇ ಅದ್ಭುತ. ಬೆಳೆದ ಅಮಟೆಕಾಯನ್ನು ಗೊರಟುಸಹಿತ ಕೊಚ್ಚಿ ಚಿಕ್ಕ ಚೂರು ಮಾಡಿ ಅದಕ್ಕೆ ಬೆಲ್ಲ, ಹಸಿಮೆಣಸು, ಕಾರದಪುಡಿ ಹಾಕಿ ಮಾಡುವ ಅದು ಸಿಹಿ ಹುಳಿ ಕಾರ ಮಿಶ್ರಿತ ಕಟ್ಟಾಮೀಠಾ ರುಚಿ. ಭೂತಾಯಿ ಪೂಜಾ ಎಡೆಗೆ ಹಾಕಿದ ಮೇಲೆ ಸುಮಾರು ಹದಿನೈದು ಇಪ್ಪತ್ತು ದಿನ ಇದರ ರುಚಿ ಸವಿಯುವ ಮಜಾನೇ ಬೇರೆ.

ಹಾಗೇ ಕಾಡಿನಲ್ಲಿ ಸಿಗುವ ನೂರೆ ಗೆಣಸು ಕೂಡ ಎಡೆ ಮಾಡುವುದು ವಾಡಿಕೆ. ಹಾಗಾಗಿ ಮಲೆನಾಡಿನ ಬೇಲಿಸಾಲಲ್ಲಿ ಈ ಗೆಣಸಿನ ಮೊದಲ್ಲೆಲ್ಲ ಅಭಯವಿತ್ತು. ಈಗ ಎಲ್ಲೆಡೆ ತಂತಿ ಮತ್ತು ಐಬೆಕ್ಸ್ ಬೇಲಿ ಬಂದು ಅದೂ ಅಪರೂಪವಾಗಿದೆ.

ಮತ್ತೊಂದು ವಿಶಿಷ್ಟ ಖಾದ್ಯ, ಸೌತೆಕಾಯಿ ಮತ್ತು ಚೀನಿಕಾಯಿ ಕರೆಯುವ ಚಿನ್ನಿಕಾಯಿ ಕಡುಬು. ಅವರೆಡೂ ಈ ಹಬ್ಬಕ್ಕೆ ಬೇಕು. ಸೌತೆ ಕಾಯಿ ಕಡುಬು ಒಂದಕ್ಕೆ ಸಾಕಷ್ಟು ತುಪ್ಪ ಹಾಕಿ, ಬಾಳೆ ಎಲೆಯಲ್ಲಿ ಸುತ್ತಿ, ನೀರು ಒಳಹೋಗದಂತೆ ಭದ್ರಪಡಿಸಿ, ಸಸಿ ಪೂಜೆ(ಭೂಮಿ ಪೂಜೆ) ಬಳಿಕ ಅದನ್ನು ಹಸಿ ಭತ್ತದ ಗದ್ದೆಯ ಕೆಸರಲ್ಲಿ ಹೂತಿಟ್ಟು ಗುರುತು ಮಾಡುತ್ತಾರೆ. ಗದ್ದೆ ಕೊಯ್ಲು ಮುಗಿದ ಬಳಿಕ ಮಾಡುವ ಭೂತನಹಬ್ಬ(ಗೊಣಬೆ-ಬಣವೆ ಪೂಜೆ) ಹಬ್ಬದ ದಿನ ಆ ಹೂತಿಟ್ಟ ಕಡುಬು ತೆಗೆದು ನೈವೇಧ್ಯ ಮಾಡುತ್ತಾರೆ.

ಇನ್ನು ಸೌತೆಕಾಯಿ ಪಚಡಿ ಸೇರಿದಂತೆ ಏಳು ಬಗೆಯ ತರಕಾರಿ ಪಲ್ಯ, ನೂರೆಂಟು ಸೊಪ್ಪು, ಅಮಟೆಕಾಯಿ ಹಾಕಿದ ಹಚ್ಚಂಬ್ಲಿ(ಬೆರೆಕೆಸೊಪ್ಪಿನ ಪಲ್ಯ), ಹೋಳಿಗೆ ಮತ್ತಿತರ ನಾಲ್ಕಾರು ಬಗೆಯ ಸಿಹಿ, ಕೊಟ್ಟೆ ಕಡುಬು ಇವೆಲ್ಲಾ ಮಾಡಲೇಬೇಕಾದ ಭೂತಾಯಿಯ ಬಯಕೆಯ ಪದಾರ್ಥಗಳು.

ಹಾಗಾಗಿ ಭೂಮಿ ಮತ್ರು ಭೂಮಿ ಮಕ್ಕಳಾದ ರೈತರ ನಡುವಿನ ವಿಶೇಷ ಕಕ್ಕುಲತೆಯ, ಕಳ್ಳುಬಳ್ಳಿಯ ಹಬ್ಬಕ್ಕೆ ಭೂಮಿಯ ಒಡಲಲ್ಲಿ ಬೆಳೆಯುವ, ಮನುಷ್ಯ ತಿನ್ನಬಹುದಾದ ಬಹುತೇಕ ಎಲ್ಲಾ ಸೊಪ್ಪು, ತರಕಾರಿ, ಗೆಡ್ಡೆಗೆಣಸುಗಳು ಆಕೆಗೆ ಪೂಜೆಗೆ ಪರಮಾನ್ನ. ಭೂತಾಯಿ ಮಕ್ಕಳ ಕಲಾ ನೈಪುಣ್ಯತೆ, ಅಡುಗೆ ಪರಿಣತಿ, ಭೂಮಿಯೊಂದಿಗಿನ ಅವರ ತಾಯಿಮಕ್ಕಳ ಅನುಬಂಧಕ್ಕೆ ಈ ಹಬ್ಬ ಒಂದು ನಿದರ್ಶನ.. 

Comments

Post a Comment

Popular posts from this blog

CBSE ವಿದ್ಯಾರ್ಥಿವೇತನ 2022 ಮಾಹಿತಿ | CBSE Scholarship 2022 Information | Central Board Of Secondary Education Scholarship 2022

  cbse scholarship 2022 ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಯಿಂದ ಆರಂಭಿಸಲಾದ CBSE ವಿದ್ಯಾರ್ಥಿವೇತನವು ಅತ್ಯುತ್ತಮ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುತ್ತದೆ. ಮಂಡಳಿಯು XI ತರಗತಿಯಿಂದ ಕಾಲೇಜು ಅಥವಾ ವಿಶ್ವವಿದ್ಯಾನಿಲಯದಲ್ಲಿ ಪದವಿಯನ್ನು ಪಡೆಯುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸುತ್ತದೆ.  ಒಂಟಿ ಹೆಣ್ಣು ಮಗುವಿಗೆ ಮೆರಿಟ್ CBSE ವಿದ್ಯಾರ್ಥಿವೇತನದ ಆಯ್ಕೆಯಾದ ಮಹಿಳಾ ವಿದ್ಯಾರ್ಥಿಗಳು ತಿಂಗಳಿಗೆ INR 500 ಸ್ವೀಕರಿಸುತ್ತಾರೆ ಮತ್ತು CBSE ವಿದ್ಯಾರ್ಥಿವೇತನದ CSSS ಗೆ ಆಯ್ಕೆಯಾದವರು INR 20,000 ವರೆಗೆ ಸ್ವೀಕರಿಸುತ್ತಾರೆ . ಒಂಟಿ ಹೆಣ್ಣು ಮಗುವಿನ CBSE ವಿದ್ಯಾರ್ಥಿವೇತನ ಅರ್ಜಿಯ ಕೊನೆಯ ದಿನಾಂಕ ನವೆಂಬರ್ 14th, 2022 ಆಗಿದೆ .  CBSE ವಿದ್ಯಾರ್ಥಿವೇತನದ ವಿವರಗಳು ನಡೆಸಿಕೊಟ್ಟರು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಅರ್ಹತೆ 10 ಮತ್ತು 12 ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರದೇಶ ಭಾರತ ಪ್ರತಿಫಲಗಳು INR 20,000 ವರೆಗೆ ಅರ್ಜಿಯ ಕೊನೆಯ ದಿನಾಂಕ ನವೆಂಬರ್ 14, 2022 ಅಧಿಕೃತ ಜಾಲತಾಣ Click Here ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ Click Here ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ Click Here ಡೌನ್ಲೋಡ್‌ ಅಪ್ಲಿಕೇಶನ್ Click Here Apply More   Scholarship :...

Kunchikal falls/Abbe Falls/ಕುಂಚಿಕಲ್ ಜಲಪಾತ/ಅಬ್ಬೆ/about of Kunchikal Falls/about of abbe falls/Kunchikal falls information/abbe falls information/abbe jalapathadabagge mahithi

 K unchikal falls/Abbe Falls/ಕುಂಚಿಕಲ್ ಜಲಪಾತ/ಅಬ್ಬೆ ಕುಂಚಿಕಲ್ ಅಬ್ಬೆ ಎಂದೂ ಕರೆಯಲ್ಪಡುವ ಕುಂಚಿಕಲ್ ಜಲಪಾತವು ಕರ್ನಾಟಕದ ಉಡುಪಿ-ಶಿವಮೊಗ್ಗ ಜಿಲ್ಲೆಯ ಗಡಿಯಲ್ಲಿರುವ ಮಾಸ್ತಿಕಟ್ಟೆ-ಹುಲಿಕಲ್‌ಗೆ ಬಹಳ ಹತ್ತಿರದಲ್ಲಿದೆ. ಶಿವಮೊಗ್ಗ ನಗರದಿಂದ ಕುಂಚಿಕಲ್ ಜಲಪಾತದ ಒಟ್ಟು ದೂರ 97 ಕಿಲೋಮೀಟರ್. ವರಾಹಿ ನದಿಯು ಹುಲಿಕಲ್ ಘಾಟಿ ದೇವಸ್ಥಾನದ ಸಮೀಪವಿರುವ ನೂರು ಬಂಡೆಗಳ ರಚನೆಗಳನ್ನು ಕೆಳಗೆ ಬೀಳಿಸುತ್ತದೆ. ಕುಂಚಿಕಲ್ ಜಲಪಾತವು ಭಾರತದಲ್ಲಿ ಅತಿ ಎತ್ತರದ ಜಲಪಾತವಾಗಿದೆ ಎಂದು ನಂಬಲಾಗಿದೆ. ಜಲಪಾತದ ಸಮೀಪದಲ್ಲಿ ಸ್ಥಾಪಿಸಲಾದ ಜಲವಿದ್ಯುತ್ ಸ್ಥಾವರವು ನೀರಿನ ಹರಿವನ್ನು ಬಹಳ ಕಡಿಮೆ ಮಾಡಿದೆ. ಕುಂಚಿಕಲ್ ಜಲಪಾತವನ್ನು ಸುತ್ತುವರೆದಿರುವ ಹಲವಾರು ಸಣ್ಣ ಮತ್ತು ಸುಂದರವಾದ ಜಲಪಾತಗಳಿವೆ, ಇದು ಸುಂದರವಾದ ದೃಶ್ಯವನ್ನು ಮಾಡುತ್ತದೆ. ಜಲಪಾತಗಳ ಎತ್ತರ: ಕುಂಚಿಕಲ್ ಜಲಪಾತವು ಸಾಮಾನ್ಯವಾಗಿ ಕಲ್ಲಿನ ಹಾದಿಯಲ್ಲಿ ಬೀಳುತ್ತದೆ ಮತ್ತು ಜಲಪಾತದ ಒಟ್ಟು ಎತ್ತರವು 455 ಮೀಟರ್ ಅಥವಾ 1,493 ಅಡಿಗಳು, ಇದು ಜಲಪಾತವು ಭಾರತದ ಅತಿ ಎತ್ತರದ ಜಲಪಾತ ಎಂಬ ಸ್ಥಾನವನ್ನು ಪಡೆದುಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಜಲಪಾತದ ಕ್ಯಾಸ್ಕೇಡ್ನ ಒಟ್ಟು ಉದ್ದವು 1 ಕಿಲೋಮೀಟರ್ಗಿಂತ ಹೆಚ್ಚು. ಅದರ ನೀರಿನ ಹರಿವಿನ ಬಗ್ಗೆ: ಹುಲಿಕಲ್ ಬಳಿ ಭೂಗತ ವಿದ್ಯುತ್ ಉತ್ಪಾದನಾ ಕೇಂದ್ರವಾಗಿರುವ ಮಾಸ್ತಿಕಟ್ಟೆಗೆ ಸಮೀಪದಲ್ಲಿ ಮಾಣಿ ಅಣೆಕಟ್ಟು ನಿರ್ಮಾಣದ ನಂತರ ಕುಂಚಿಕಲ್ ಜಲಪಾತದ ನೀ...

ಶಿವಮೊಗ್ಗ ಜಿಲ್ಲೆ/About of Shimoga district/Shimogga History/near Shimogga tourism place /Malenadu/Best place in Shimogga/Best tourism place in Shimogga/shimogga jilleya bagge mahithi

                    ಶಿವಮೊಗ್ಗ ಜಿಲ್ಲೆ/ Shimoga district ಶಿವಮೊಗ್ಗ ಜಿಲ್ಲೆ ಕರ್ನಾಟಕದ ಮಲೆನಾಡು ಪ್ರದೇಶದ ಒಂದು ಭಾಗವಾಗಿದೆ. ಜಿಲ್ಲೆ ಹಾವೇರಿ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಂದ ಸುತ್ತುವರೆದಿದೆ ಮತ್ತು ಬೆಂಗಳೂರಿನಿಂದ ವಾಯುವ್ಯಕ್ಕೆ 300 ಕಿಮೀ ದೂರದಲ್ಲಿದೆ. ಪಶ್ಚಿಮ ಘಟ್ಟಗಳ ಹೆಬ್ಬಾಗಿಲಿನಂತೆ ಆರಾಮದಾಯಕವಾಗಿ ನೆಲೆಸಿರುವ ಶಿವಮೊಗ್ಗ ಪ್ರದೇಶವು ಕಾಡುಗಳು, ಹೊಳೆಯುವ ಜಲಮೂಲಗಳು, ಅದ್ಭುತವಾದ ಜಲಪಾತಗಳು ಮತ್ತು ಆಕಾಶಕ್ಕೆ ಏರುತ್ತಿರುವ ಹಸಿರು ಶಿಖರಗಳಿಂದ ಸಮೃದ್ಧವಾದ ಹಸಿರು ಭೂದೃಶ್ಯವಾಗಿದೆ. ಈ ನೈಸರ್ಗಿಕ ಭೂದೃಶ್ಯದೊಂದಿಗೆ ಬೆರೆಯುವುದು ಇತಿಹಾಸ, ಪರಂಪರೆ ಮತ್ತು ಆಧ್ಯಾತ್ಮಿಕತೆಯಿಂದ ಸಮೃದ್ಧವಾಗಿರುವ ಭೂಮಿಯಾಗಿದೆ. ಶಿವಮೊಗ್ಗ ನಗರ ಜೀವನದ ಜಂಜಾಟದಿಂದ ಪರಿಪೂರ್ಣವಾದ ಹೊರಹೋಗುವಿಕೆಯಾಗಿದ್ದು, ಜನರು ತಮ್ಮ ಬಿಡುವಿಲ್ಲದ ವೇಳಾಪಟ್ಟಿಯಿಂದ ವಿರಾಮವನ್ನು ತೆಗೆದುಕೊಳ್ಳಲು ಬಯಸುವವರಿಗೆ ಇದು ಒಂದು ತಾಣವಾಗಿದೆ. ಶಿವಮೊಗ್ಗ ಜಿಲ್ಲೆ ಜೋಗ್‌ನಲ್ಲಿ ಕರ್ನಾಟಕದ ಅತ್ಯಂತ ಜನಪ್ರಿಯ ಜಲಪಾತಗಳಿಗೆ ನೆಲೆಯಾಗಿದೆ, ನೃತ್ಯ ಮತ್ತು ನಾಟಕ ತರಬೇತಿಗೆ ಹೆಸರುವಾಸಿಯಾದ ನಿನಾಸಂ ಸಂಸ್ಥೆ, ಕರ್ನಾಟಕದ ಏಕೈಕ ಸಂಸ್ಕೃತ ಭಾಷೆ ಮಾತನಾಡುವ ಗ್ರಾಮ ಮತ್ತೂರು ಮತ್ತು ಅನೇಕ ವನ್ಯಜೀವಿ ಅಭಯಾರಣ್ಯಗಳು ಮತ್ತು ದೇವಾಲಯಗಳನ್ನು ಹೊಂದಿದೆ. ಲಿಂಗನಮಕ್ಕಿ ಅಣೆಕಟ್ಟಿ...