Skip to main content

Bhoomi hunnime information in Kannada or seegehunnime-/ಭೂಮಿ ಹುಣ್ಣಿಮೆ ,ಬೂಮಣಿ ಹಬ್ಬ/Bhoomi hunnime bagge mahithi

ಭೂಮಿ ಹುಣ್ಣಿಮೆ ,ಬೂಮಣಿ ಹಬ್ಬ



 ಭೂಮಣಿ ಹಬ್ಬ ಎಂದು ಕರೆಯುವ ಭೂಮಿ, ಬೆಳೆಯ ಪೂಜೆಯ ಹಬ್ಬವನ್ನು ಮಲೆನಾಡಿನಲ್ಲಿ ಭೂಮಿ ಹುಣ್ಣಿಮೆ, ಬಯಲುನಾಡಿನಲ್ಲಿ ಸೀಗೆ ಹುಣ್ಣಿಮೆ ಎಂದು ಕರೆಯುತ್ತಾರೆ. ಎತ್ತು ಓಡಿಸುವ, ಬೆಂಕಿಯ ಮೇಲೆ ಹೋರಿ ನಡೆಸುವ ಬಯಲುಸೀಮೆಯ ಸೀಗೆ ಹುಣ್ಣಿಮೆ, ಭೂಮಿ ತಾಯಿಗೆ ಬಯಕೆ ನೀಡುವ ಭೂಮಿ ತಾಯಿಯ ಬಯಕೆಯ ಸೀಮಂತವನ್ನು ನಡೆಸುವ ಮಲೆನಾಡಿನ ಬೂಮಣಿ ಹಬ್ಬ ಆಚರಣೆಯಲ್ಲಿ ತುಸು ಭಿನ್ನ.



ಮಲೆನಾಡೆಂದರೆ…. ಕಾಡು, ಪರಿಸರ, ಸಸ್ಯ, ಮಳೆ, ಬೆಳೆ ಇವುಗಳೆಲ್ಲದರ ಒಟ್ಟಂದದದ ಬದುಕೇ ಬುಡಕಟ್ಟು ಬದುಕು. ಮಲೆನಾಡಿನ ಮೂಲನಿವಾಸಿಗಳು, ಕೆಳವರ್ಗಗಳು ಪ್ರಕೃತಿ ಆರಾಧನೆಯ ಈ ಭೂಮಿ ಹುಣ್ಣಿಮೆಯನ್ನು ವಿಶಿಷ್ಟವಾಗಿ ಆಚರಿಸುತ್ತಾರೆ. ಒಂದೆರಡು ವಾರಗಳ ಮೊದಲು ಬೂಮಣಿ ಬುಟ್ಟಿ ಅಲಂಕಾರ ಪ್ರಾರಂಭಿಸುವ ಮಹಿಳೆಯರು ಸಾಂಪ್ರದಾಯಿಕ ಚಿತ್ತಾರವನ್ನು ರಚಿಸುತ್ತಾರೆ. ನಂತರ ಮನೆಯ ಯಜಮಾನ ಹಬ್ಬದ ಅಗತ್ಯ ವಸ್ತುಗಳನ್ನು ಸಂಗ್ರಹಿಸುತ್ತಾನೆ. ಇಂಥ ಸಂಗ್ರಹಿಸಿದ ವಸ್ತುಗಳನ್ನು ಚರಗ ಅಥವಾ ಹಂಚೆಬ್ಲಿ ಹಾಗೂ ಎಡೆಯ ಪದಾರ್ಥಗಳಾಗಿ ವಿಂಗಡಿಸಲಾಗುತ್ತದೆ.

ಸೊಪ್ಪು-ಕಾಯಿಗಳ ಹಸಿರು ಚರಗವನ್ನು ರೈತ ಮುಂಜಾನೆ ಜಮೀನು-ಬೆಳೆಗಳಿಗೆ ಬೀರಿ ಸಸ್ಯ, ಪ್ರಾಣಿ, ಪಕ್ಷಿಗಳಿಗೆ ನೀಡುತ್ತಾನೆ. ನಂತರ ಭೂಮಿಯೆಂದರೆ ನೆಲ, ನೆಲದ ಬೆಳೆಗಳಿಗೆ ಪೂಜೆ ಮಾಡಿ ಅಲ್ಲಿ ಕಡಬು-ಕಜ್ಜಾಯಗಳ ಥರಾವರಿ ಆಹಾರವನ್ನಿಟ್ಟು ನೈವೇದ್ಯ ಮಾಡಿ, ಎಡೆಹಾಕಿ, ತಾನೇ ತಿಂದು ಒಂದು ಎಡೆಯನ್ನು ಭೂಮಿಯಲ್ಲಿ ಹೂತು ಬೆಳೆ-ಭೂಮಿಯ ಬಯಕೆ ತೀರಿಸುತ್ತಾನೆ.

ಮುಂಜಾನೆ ಚರ ಬೀರುವಾಗ ಹಾಡು, ಘೋಷಣೆಯೊಂದಿಗೆ ಚರ ಬೀರುವ ರೈತ ನಂತರ ಭೂಮಿ-ಬೆಳೆಪೂ ಜೆಯ ನಂತರ ಎಡೆಯನ್ನು ನೀರು, ಕಾಗೆ ಗಳಿಗೆ ನೀಡುತ್ತಾನೆ. ಹೀಗೆ ಒಂದೆರಡು ವಾರಗಳ ಪೂರ್ವತಯಾರಿಯ ಹಬ್ಬಕ್ಕಾಗಿ ಬಿಡುವುಮಾಡಿಕೊಳ್ಳುವ ರೈತ ತಾನು ತಿಂದು, ಸಸ್ಯ, ಪ್ರಾಣಿ, ಪಕ್ಷಿಗಳಿಗೆ ತಿನ್ನಿಸಿ ಸಂಬ್ರಮಿಸುತ್ತಾನೆ. ಪ್ರದೇಶ, ಜನಾಂಗೀಯವಾರು ತುಸು ಭಿನ್ನತೆಯಿಂದ ಆಚರಿಸುವ ಈ ಹಬ್ಬ ಪ್ರಕೃತಿ, ಬೆಳೆ, ಮಳೆ,ಜಲ ಫಸಲು ಭರಿತ ಬೆಳೆಯ ಬಯಕೆ ತೀರಿಸುವ ಸೀಮಂತದ ಹಬ್ಬ. 

                                          

ಇವತ್ತು ಬೆಳಗ್ಗೆ ಭೂಮಿ ಹುಣ್ಣಿಮೆ ಎಂದು ಶಿಷ್ಟಭಾಷೆಯಲ್ಲಿ ಕರೆಯುವ, ಭೂಮಣ್ಣಿ ಹಬ್ಬ ಎಂದು ನಮ್ಮ ಮಾತಲ್ಲಿ ಹೇಳುವ ಅನ್ನ ಕೊಡುವ ಭೂಮಿಯನ್ನು ಪೂಜಿಸುವ ಹಬ್ಬ ಮುಗಿಸಿ ಕೂತಿರುವೆ.

ಸಂಜೆ ಇಳಿಬಿಸಿಲಿನ ಹೊತ್ತಲ್ಲಿ ಅವ್ವನ ಜೊತೆ ಲೋಕಾಭಿರಾಮ ಮಾತನಾಡುತ್ತಾ ಕುಳಿತವನಿಗೆ ನಿನ್ನೆ ರಾತ್ರಿ ಬೆಳಗಿನ ಜಾವದವರೆಗೆ ಹಬ್ಬದ ಅಡುಗೆ ಮಾಡಿದ ಅವ್ವ, ಬೇಗ ಊಟ ಮಾಡಿ ಮಲಗಾನ.. ಎಂದಾಗ ಭೂಮಣ್ಣಿ ಹಬ್ಬ ಎಂಬ ಮಣ್ಣಿನಮಕ್ಕಳ ಸಂಭ್ರಮದ ಮಜಲುಗಳು ಕಣ್ಣಮುಂದೆ ಬಂದುಹೋದವು.

ಹಾಗೆ ನೋಡಿದರೆ ನಿನ್ನೆಯಿಂದಲೇ ಈ ಹಬ್ಬದ ಕುರಿತು ಮಲೆನಾಡು ಮತ್ತು ಬಯಲುಸೀಮೆ ಕಡೆಯ ಗೆಳೆಯರು ಇಲ್ಲಿ ಸಾಕಷ್ಟು ಬರೆದಿದ್ದಾರೆ. ತಮ್ಮ ತಮ್ಮ ಕಡೆಯ ಹಬ್ಬದ ವೈಶಿಷ್ಟ್ಯಗಳ ಬಗ್ಗೆ ಸಂಭ್ರಮದಿಂದಲೇ ಎಲ್ಲ ಹಂಚಿಕೊಂಡಿದ್ದಾರೆ. ನಮ್ಮ ಸಾಗರ, ಸೊರಬ, ಹೊಸನಗರ, ತೀರ್ಥಹಳ್ಳಿ ಕಡೆಯಂತೂ ಬಹುತೇಕರ ವಾಟ್ಸಪ್ ಸ್ಟೇಟಸ್ ಮತ್ತು ಗುಂಪುಗಳಲ್ಲಿ ಭೂಮಣ್ಣಿ ಹಬ್ಬದ ಫೋಟೊ, ವಿಡಿಯೋ, ಶುಭಾಶಯ ಕಾರ್ಡುಗಳ ಹೊಳೆ ಹರಿದಿದೆ.

ಹಾಗಾಗಿ ಈ ನೆಲಮೂಲದ ಆಚರಣೆಯ ಕುರಿತ ಸಾಮಾನ್ಯ ಸಂಗತಿಗಳ ಬದಲು, ನಮ್ಮಲ್ಲಿ ನಾವು ಸಾಂಪ್ರದಾಯಿಕವಾಗಿ ರೂಢಿಯಲ್ಲಿರುವ ಕೆಲವು ನಿರ್ದಿಷ್ಟ ಆಚರಣೆಗಳ ಬಗ್ಗೆ ಹೇಳುವೆ;




ನಮ್ಮ ಮನೆಗಳಲ್ಲಿ ಈ ಹಬ್ಬದ ಅಚರಣೆ ಶುರುವಾಗುವುದು ಮಹಾನವಮಿ ದಿನದಿಂದಲೇ. ಮಹಾನವಮಿಗೆ ಮೂರ್ನಾಲ್ಕು ದಿನ ಇರುವಾಗಲೇ ಭೂಮಣ್ಣಿ ಬುಟ್ಟಿ ಎನ್ನುವ ಒಂದು ದೊಡ್ಡದು ಮತ್ತು ಒಂದು ಚಿಕ್ಕದು ಸೇರಿ ಎರಡು ಬುಟ್ಟಿಗಳಿಗೆ ಮೆಂತೆ ಹಿಟ್ಟು, ನ್ಯೂಸ್ ಪೇಪರ್ ಕಲಸಿಟ್ಟು ತುಸು ಕೊಳೆಸಿದ ಪೇಸ್ಟ್ ಮಾಡಿ ಬಳಿದು, ನಂತರ ಕೆಮ್ಮಣ್ಣು ಬಳಿದು ಒಣಗಿಸಿ ಚಿತ್ರ ಬರೆಯಲು ಸಜ್ಜುಗೊಳಿಸಿಡುತ್ತಾರೆ.

ಮಹಾನವಮಿಯ ದಿನ ಪೂಜೆ ಮಾಡಿದ ಬಳಿಕ ಆ ಜೋಡಿ ಬುಟ್ಟಿಗಳ ಮೇಲೆ ಹಸೆ ಚಿತ್ತಾರ ಮೂಡಿಸುತ್ತಾರೆ. ಸಾಮಾನ್ಯವಾಗಿ ನಮ್ಮಲ್ಲಿ ಎರಡು ಬಗೆಯ ಭೂಮಣ್ಣಿ ಬುಟ್ಟಿ ಬಳಕೆಯಲ್ಲಿದ್ದು, ಅವರವರ ಮನೆತನದ ಸಂಪ್ರದಾಯದಂತೆ ಕೆಮ್ಮಣ್ಣು ಬಳಿದ ಬುಟ್ಟಿಯ ಮೇಲೆ ಅಕ್ಕಿಹಿಟ್ಟಿನ ಬಿಳಿ ಬಣ್ಣದ ಚಿತ್ತಾರ ಬರೆಯುತ್ತಾರೆ. ಮತ್ತೆ ಕೆಲವರು ಕೆಮ್ಮಣ್ಣಿನ ಬುಟ್ಟಿ ಕ್ಯಾನವಾಸ್ ಮೇಲೆ ಗುಡ್ಡೆಗೇರು ಕಾಯಿ ರಸವನ್ನು ಬಳಸಿ ಕಪ್ಪು ಬಣ್ಣದಲ್ಲಿ ಚಿತ್ತಾರ ಮೂಡಿಸುತ್ತಾರೆ.

ಮಹಾನವಮಿಯಿಂದ ಭೂಮಿ ಹುಣ್ಣಿಮೆ ನಡುವಿನ ಐದು ದಿನದಲ್ಲಿ ಬುಟ್ಟಿ ಚಿತ್ತಾರ ಮುಗಿದು, ಹಬ್ಬದ ಹಿಂದಿನ ದಿನ ಬುಟ್ಟಿ ಸಿದ್ಧವಾಗಬೇಕು.

ಹಬ್ಬದ ಅಡುಗೆಗಳದ್ದೇ ಒಂದು ಬಹಳ ಕುತೂಹಕರ ಲೋಕ. ಕಾಡು ಗೆಣಸಿನಿಂದ ಹಿಡಿದು ಊರ ಅಮಟೆಕಾಯಿವರೆಗೆ ಭೂಮಣ್ಣಿ ಹಬ್ಬಕ್ಕೆ ಮಾಡಲೇಬೇಕಾದ ಅಡುಗೆಗಳ ಪಟ್ಟಿ ದೊಡ್ಡದಿದೆ.

ಒಂಥರಾ ಆಧುನಿಕ ಮಂಚೂರಿಯನ್ ಹೋಲುವ ಅಮಟೆಕಾಯಿ ಪಲ್ಯದ ರುಚಿಯೇ ಅದ್ಭುತ. ಬೆಳೆದ ಅಮಟೆಕಾಯನ್ನು ಗೊರಟುಸಹಿತ ಕೊಚ್ಚಿ ಚಿಕ್ಕ ಚೂರು ಮಾಡಿ ಅದಕ್ಕೆ ಬೆಲ್ಲ, ಹಸಿಮೆಣಸು, ಕಾರದಪುಡಿ ಹಾಕಿ ಮಾಡುವ ಅದು ಸಿಹಿ ಹುಳಿ ಕಾರ ಮಿಶ್ರಿತ ಕಟ್ಟಾಮೀಠಾ ರುಚಿ. ಭೂತಾಯಿ ಪೂಜಾ ಎಡೆಗೆ ಹಾಕಿದ ಮೇಲೆ ಸುಮಾರು ಹದಿನೈದು ಇಪ್ಪತ್ತು ದಿನ ಇದರ ರುಚಿ ಸವಿಯುವ ಮಜಾನೇ ಬೇರೆ.

ಹಾಗೇ ಕಾಡಿನಲ್ಲಿ ಸಿಗುವ ನೂರೆ ಗೆಣಸು ಕೂಡ ಎಡೆ ಮಾಡುವುದು ವಾಡಿಕೆ. ಹಾಗಾಗಿ ಮಲೆನಾಡಿನ ಬೇಲಿಸಾಲಲ್ಲಿ ಈ ಗೆಣಸಿನ ಮೊದಲ್ಲೆಲ್ಲ ಅಭಯವಿತ್ತು. ಈಗ ಎಲ್ಲೆಡೆ ತಂತಿ ಮತ್ತು ಐಬೆಕ್ಸ್ ಬೇಲಿ ಬಂದು ಅದೂ ಅಪರೂಪವಾಗಿದೆ.

ಮತ್ತೊಂದು ವಿಶಿಷ್ಟ ಖಾದ್ಯ, ಸೌತೆಕಾಯಿ ಮತ್ತು ಚೀನಿಕಾಯಿ ಕರೆಯುವ ಚಿನ್ನಿಕಾಯಿ ಕಡುಬು. ಅವರೆಡೂ ಈ ಹಬ್ಬಕ್ಕೆ ಬೇಕು. ಸೌತೆ ಕಾಯಿ ಕಡುಬು ಒಂದಕ್ಕೆ ಸಾಕಷ್ಟು ತುಪ್ಪ ಹಾಕಿ, ಬಾಳೆ ಎಲೆಯಲ್ಲಿ ಸುತ್ತಿ, ನೀರು ಒಳಹೋಗದಂತೆ ಭದ್ರಪಡಿಸಿ, ಸಸಿ ಪೂಜೆ(ಭೂಮಿ ಪೂಜೆ) ಬಳಿಕ ಅದನ್ನು ಹಸಿ ಭತ್ತದ ಗದ್ದೆಯ ಕೆಸರಲ್ಲಿ ಹೂತಿಟ್ಟು ಗುರುತು ಮಾಡುತ್ತಾರೆ. ಗದ್ದೆ ಕೊಯ್ಲು ಮುಗಿದ ಬಳಿಕ ಮಾಡುವ ಭೂತನಹಬ್ಬ(ಗೊಣಬೆ-ಬಣವೆ ಪೂಜೆ) ಹಬ್ಬದ ದಿನ ಆ ಹೂತಿಟ್ಟ ಕಡುಬು ತೆಗೆದು ನೈವೇಧ್ಯ ಮಾಡುತ್ತಾರೆ.

ಇನ್ನು ಸೌತೆಕಾಯಿ ಪಚಡಿ ಸೇರಿದಂತೆ ಏಳು ಬಗೆಯ ತರಕಾರಿ ಪಲ್ಯ, ನೂರೆಂಟು ಸೊಪ್ಪು, ಅಮಟೆಕಾಯಿ ಹಾಕಿದ ಹಚ್ಚಂಬ್ಲಿ(ಬೆರೆಕೆಸೊಪ್ಪಿನ ಪಲ್ಯ), ಹೋಳಿಗೆ ಮತ್ತಿತರ ನಾಲ್ಕಾರು ಬಗೆಯ ಸಿಹಿ, ಕೊಟ್ಟೆ ಕಡುಬು ಇವೆಲ್ಲಾ ಮಾಡಲೇಬೇಕಾದ ಭೂತಾಯಿಯ ಬಯಕೆಯ ಪದಾರ್ಥಗಳು.

ಹಾಗಾಗಿ ಭೂಮಿ ಮತ್ರು ಭೂಮಿ ಮಕ್ಕಳಾದ ರೈತರ ನಡುವಿನ ವಿಶೇಷ ಕಕ್ಕುಲತೆಯ, ಕಳ್ಳುಬಳ್ಳಿಯ ಹಬ್ಬಕ್ಕೆ ಭೂಮಿಯ ಒಡಲಲ್ಲಿ ಬೆಳೆಯುವ, ಮನುಷ್ಯ ತಿನ್ನಬಹುದಾದ ಬಹುತೇಕ ಎಲ್ಲಾ ಸೊಪ್ಪು, ತರಕಾರಿ, ಗೆಡ್ಡೆಗೆಣಸುಗಳು ಆಕೆಗೆ ಪೂಜೆಗೆ ಪರಮಾನ್ನ. ಭೂತಾಯಿ ಮಕ್ಕಳ ಕಲಾ ನೈಪುಣ್ಯತೆ, ಅಡುಗೆ ಪರಿಣತಿ, ಭೂಮಿಯೊಂದಿಗಿನ ಅವರ ತಾಯಿಮಕ್ಕಳ ಅನುಬಂಧಕ್ಕೆ ಈ ಹಬ್ಬ ಒಂದು ನಿದರ್ಶನ.. 

Comments

Post a Comment

Popular posts from this blog

ಉಚಿತ ಬ್ಯೂಟಿಷಿಯನ್ ತರಬೇತಿ: ಸ್ವ ಉದ್ಯೋಗ ಪ್ರಾರಂಭಿಸಲು ಸುವರ್ಣಾವಕಾಶ!

ಮಹಿಳೆಯರಿಗೆ ಉಚಿತ ಬ್ಯೂಟಿಷಿಯನ್ ತರಬೇತಿ – ಸ್ವ ಉದ್ಯೋಗಕ್ಕೆ ದಾರಿ ತೆರೆದ ಕೆನರಾ ಬ್ಯಾಂಕ್ RSETI ಕುಮಟಾ, ಜುಲೈ 2025: ಮಹಿಳೆಯರು ತಮ್ಮ ಕನಸಿನ ಸ್ವ ಉದ್ಯೋಗ ಆರಂಭಿಸಲು ಉತ್ತಮ ಅವಕಾಶ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI), ಕುಮಟಾ ಉಚಿತ ಬ್ಯೂಟಿಷಿಯನ್ ತರಬೇತಿ ಕೋರ್ಸ್ ಅನ್ನು 14 ಜುಲೈ 2025 ರಿಂದ 17 ಆಗಸ್ಟ್ 2025 ರವರೆಗೆ ಆಯೋಜಿಸಿದೆ. ಈ 35 ದಿನಗಳ ಉಚಿತ ತರಬೇತಿ ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಹಾಗೂ ಸ್ವ ಉದ್ಯಮ ಆರಂಭಿಸಲು ಮಾರ್ಗದರ್ಶನ ನೀಡಲಿದೆ. ಬಿಪಿಎಲ್ ಕುಟುಂಬದವರು ಮತ್ತು ಗ್ರಾಮೀಣ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ. 📌 ಮುಖ್ಯ ಅಂಶಗಳು: ಕಾರ್ಯಕ್ರಮದ ಹೆಸರು: ಉಚಿತ ಬ್ಯೂಟಿಷಿಯನ್ ತರಬೇತಿ ಆಯೋಜಕ: ಕೆನರಾ ಬ್ಯಾಂಕ್ RSETI, ಕುಮಟಾ ಸ್ಥಳ: ಇಂಡಸ್ಟ್ರೀಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರ ಕನ್ನಡ – 581343 ಅವಧಿ: 14 ಜುಲೈ 2025 – 17 ಆಗಸ್ಟ್ 2025 ಅರ್ಜಿ ವಿಧಾನ: ಆನ್ಲೈನ್ ಅಥವಾ ನೇರ ನೋಂದಣಿ ಸಂಪರ್ಕ ಸಂಖ್ಯೆ: 9449860007 / 9538281989 / 9916783825 / 888044612 🎯 ತರಬೇತಿಯ ಉದ್ದೇಶ: ✅ ಮಹಿಳೆಯರಲ್ಲಿ ಸ್ವ ಉದ್ಯೋಗ ಚಟುವಟಿಕೆಗೆ ಉತ್ತೇಜನೆ ನೀಡುವುದು ✅ ಬಿಪಿಎಲ್ ಮಹಿಳೆಯರಿಗೆ ವೃತ್ತಿಪರ ಬ್ಯೂಟಿಷಿಯನ್ ತರಬೇತಿ ನೀಡುವುದು ✅ ಗ್ರಾಮೀಣ ಹಾಗೂ ನಗರ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಕಲ್ಪಿಸುವುದು ...

Chandrayaan 3 Information In Kannada | ಇಸ್ರೋದ ಮಹತ್ವಕಾಂಕ್ಷೆಯ ಚಂದ್ರಯಾನ-3ರ ಕಡೆ ಎಲ್ಲರ ಗಮನ ,ಇಸ್ರೋ ಯೋಜನೆಯ ವಿಶೇಷತೆಯೇನು?

  ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ತನ್ನ ಚಂದ್ರಯಾನ-3 ರ ಮೂರನೇ ಆವೃತ್ತಿಯನ್ನು ಜುಲೈರಂದು ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಬಾಹ್ಯಾಕಾಶ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ. ಚಂದ್ರಯಾನ-3 ಅನ್ನು ಜುಲೈ 2023 ರಲ್ಲಿ ಉಡಾವಣೆ ಮಾಡಲು ಸಜ್ಜಾಗಿದೆ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಮೂರನೇ ಚಂದ್ರನ ಕಾರ್ಯಾಚರಣೆಯನ್ನು ಜುಲೈ 2023 ರಲ್ಲಿ ಪ್ರಾರಂಭಿಸಲು ಯೋಜಿಸಿದೆ. ಚಂದ್ರಯಾನ -3 ಕೊಂಡೊಯ್ಯುವ ಹೆಚ್ಚು ಸಾಮರ್ಥ್ಯದ ಚಂದ್ರನ ರೋವರ್, ಇದು ಅವಶ್ಯಕವಾಗಿದೆ ಭವಿಷ್ಯದ ಅಂತರಗ್ರಹ ಪರಿಶೋಧನೆಗಳು, ಭಾರತೀಯ ಬಾಹ್ಯಾಕಾಶ ಸಂಸ್ಥೆ, ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಪ್ರಕಾರ. 👉 ಇಸ್ರೋ ಯೋಜನೆಯಬಗ್ಗೆ ಮತ್ತಷ್ಟು ತಿಳಿಯಿರಿ Click here ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ತನ್ನ ಚಂದ್ರಯಾನ-3 ರ ಮೂರನೇ ಆವೃತ್ತಿಯನ್ನು ಜುಲೈ 12 ರಂದು ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಬಾಹ್ಯಾಕಾಶ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಮುಖ ಲಿಂಕ್‌ಗಳು: ಇತ್ತೀಚಿನ ಸುದ್ದಿ APPLY HERE  ಕ್ಲಿಕ್ ಉಚಿತ ಸರ್ಕಾರಿ ಯೋಜನೆ APPLY HERE ಕ್ಲಿಕ್ ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳು APPLY HERE  ಕ್ಲಿಕ್ ಚಂದ್ರಯಾನ-3 ಜುಲೈ 2023 ರಲ್ಲಿ ಉಡಾವಣೆಗೆ ಸಿದ್ಧವಾಗಿದೆ ಎಸ್ ಸೋಮನಾಥ್ ಪ್ರಕಾರ, ಜಿಯೋಸಿಂಕ್ರೋನಸ್ ಲಾಂಚ್ ವೆಹಿಕಲ್ ಮಾರ್ಕ್-III (GSLV Mk-III) ಮು...